ಕುಶಾಲನಗರ, ನ. 30 : ಕಾವೇರಿ ತಾಲೂಕು ರಚನೆಗೆ ಆಗ್ರಹಿಸಿ ನಡೆಯುತ್ತಿರುವ ಧರಣಿ ಕುಶಾಲನಗರ ಗೌಡ ಸಮಾಜದ ಆಶ್ರಯದಲ್ಲಿ ನಡೆಯಿತು. ಪಟ್ಟಣದ ಕಾರು ನಿಲ್ದಾಣದ ಆವರಣದಲ್ಲಿನ ಗುಂಡೂರಾವ್ ಸತ್ಯಾಗ್ರಹ ವೇದಿಕೆಯಲ್ಲಿ ಸಂಘದ ಅಧ್ಯಕ್ಷ ಕೇಚಪ್ಪನ ಮೋಹನ್ ಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಪಾಲ್ಗೊಂಡು ತಾಲೂಕು ರಚನೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರು ಮಾನವ ಸರಪಳಿ ರಚಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು.

ಸಮಾಜದ ಕಾರ್ಯದರ್ಶಿ ಬೈಮನ ಪೊನ್ನಪ್ಪ, ಸಹ ಕಾರ್ಯದರ್ಶಿ ಹಾಲುಗುಂಜ ಕೃಷ್ಣಮೂರ್ತಿ, ಖಜಾಂಚಿ ಪಟ್ಟಂದಿ ಬೀನಾ ಸೀತಾರಾಂ, ಪ್ರಮುಖರಾದ ಪಂಜಿಪಳ್ಳ ಯತೀಶ್, ಪೊನ್ನಚ್ಚನ ಮೋಹನ್, ಕವಿತಾ ಮೋಹನ್, ಬೈಮನ ಬೋಜಮ್ಮ ಮತ್ತು ಹೋರಾಟ ಸಮಿತಿ ಪ್ರಮುಖರು ಇದ್ದರು.