ಗೋಣಿಕೊಪ್ಪಲು, ಡಿ. 2: ದೇವರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಮಚ್ಚಿ ಗ್ರಾಮಕ್ಕೆ ರೂ. 20 ಲಕ್ಷ ವೆಚ್ಚದಲ್ಲಿ 20 ಸಾವಿರ ಲೀಟರ್ ಸಾಮಥ್ರ್ಯದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣದ ಕಾಮಗಾರಿಗೆ ಜಿ.ಪಂ. ಸದಸ್ಯೆ ಪಂಕಜ ಭೂಮಿಪೂಜೆ ನೆರವೇರಿಸಿದರು.

ಗಿರಿಜನ ಉಪಯೋಜನೆ ಹಾಗೂ ವಿಶೇಷ ಘಟಕ ಯೋಜನೆಯಡಿಯಲ್ಲಿ ಟ್ಯಾಂಕ್ ನಿರ್ಮಾಣಗೊಳ್ಳಲಿದ್ದು, ಸುಮಾರು 50 ಕುಟುಂಬಗಳಿಗೆ ಇದು ಪ್ರಯೋಜನವಾಗಲಿದೆ ಎಂದು ಅವರು ಹೇಳಿದರು.

ಈ ಸಂದರ್ಭ ತಾ.ಪಂ ಸದಸ್ಯೆ ಆಶಾ ಜೇಮ್ಸ್, ಗ್ರಾ.ಪಂ. ಸದಸ್ಯೆ ಶಾಂತಿ, ರಾಜ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೋಹನ್, ವಲಯ ಕಾಂಗ್ರೆಸ್ ಅಧ್ಯಕ್ಷ ಬೆನ್ನಿ, ತಿತಿಮತಿ ಗ್ರಾ.ಪಂ. ಅಧ್ಯಕ್ಷ ಶಿವಕುಮಾರ್, ಹಿರಿಯರಾದ ಎ. ಸುಬ್ಬಯ್ಯ ಗುತ್ತಿಗೆದಾರ ರಮೇಶ್ ಸೇರಿದಂತೆ ಸ್ಥಳೀಯ ನಿವಾಸಿಗಳು ಇದ್ದರು.