ನಾಪೋಕ್ಲು, ಡಿ. 2: ಕೆಲವು ದಿನಗಳಿಂದ ಸ್ಥಗಿತಗೊಂಡಿದ್ದ ಅಕ್ರಮ ಮರಳುಗಾರಿಕೆ ಇದೀಗ ನಾಪೋಕ್ಲು ವ್ಯಾಪ್ತಿಯಲ್ಲಿ ಮತ್ತೆ ಆರಂಭವಾಗಿದ್ದು, ಸ್ಥಳೀಯ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಇಲ್ಲಿಗೆ ಸಮೀಪದ ಚೆರಿಯಪರಂಬು, ಕಲ್ಲುಮೊಟ್ಟೆ ವ್ಯಾಪ್ತಿಯಲ್ಲಿ ಒಂದು ವಾರದಿಂದ ರಾತ್ರಿ ಸಮಯದಲ್ಲಿ ಅಕ್ರಮವಾಗಿ ವಾಹನಗಳ ಮೂಲಕ ಕಾವೇರಿ ನದಿಯಿಂದ ನಿರಂತರ ಮರಳು ಸಾಗಿಸುವದರಿಂದಾಗಿ ಅಶಾಂತಿಗೆ ಕಾರಣವಾಗಿದ್ದು, ಈ ಬಗ್ಗೆ ಪೊಲೀಸರು ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರ¯್ಲದೆ ಕಳೆದ ಒಂದು ವರ್ಷದ ಹಿಂದೆ ಚೆರಿಯಪರಂಬು ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದಾರೆ ಎನ್ನಲಾದ ಎರಡು ತಂಡಗಳ ನಡುವೆ ಮಾರಾಮಾರಿಯಾಗಿ ಆಸ್ಪತ್ರೆಗೆ ದಾಖಲಾಗಿ ಜೀವಾಪಾಯದಿಂದ ಪಾರಾದ ಘಟನೆಯಿಂದ ಗ್ರಾಮಸ್ಥರು ಭಯಭೀತರಾಗಿದ್ದರು. ಇದೀಗ ಆ ಘಟನೆ ಮರೆಯುವ ಮುನ್ನವೇ ಪುನ: ಮರಳುಗಾರಿಕೆ ದಂಧೆ ತಲೆಎತ್ತಿದ್ದು ಸಂಬಂಧಿಸಿದವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಚೆರಿಯಪರಂಬು, ಕಲ್ಲುಮೊಟ್ಟೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

- ದುಗ್ಗಳ