ಸಿದ್ದಾಪುರ, ಡಿ. 2: ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯ ಎಂ.ಜಿ. ರಸ್ತೆಯ ಶ್ರೀ ಮುತ್ತಪ್ಪ ದೇವಾಲಯಕ್ಕೆ ತೆರಳುವ ರಸ್ತೆ ಹಾಗೂ ಕರಡಿಗೋಡು ರಸ್ತೆಗೆ ರೂ. 10 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಜಿ.ಪಂ. ಸದಸ್ಯೆ ಸರಿತಾ ಪೂಣಚ್ಚ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಈಗಾಗಲೇ ಜಿ.ಪಂ. ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರ ಹಾಗೂ ಕೊಂಡಂಗೇರಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಈಗಾಗಲೇ ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರು, ರಸ್ತೆ ಕಿರು ಸೇತುವೆ ಕಾಮಗಾರಿಗಳು ಪ್ರಗತಿಯಲ್ಲಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಹಂತ ಹಂತವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವದು ಹಾಗೂ ಸಮಸ್ಯೆಗಳಿಗೆ ಸ್ಪಂದಿಸುವದಾಗಿ ಭರವಸೆ ನೀಡಿದರು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಮಣಿ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಹಾಜರಿದ್ದರು.