ಗೋಣಿಕೋಪ್ಪ, ಡಿ. 2: ಅರುವತೋಕ್ಲುವಿನ ಸರ್ವದ್ಯೆವತ ವಿದ್ಯಾ ಸಂಸ್ಥೆಯ ತನ್ನ 27ನೇ ವರ್ಷದ ವಾರ್ಷಿಕೋತ್ಸವ ಇತ್ತೀಚಿಗೆ ನಡೆಯಿತು.

ವಿದ್ಯಾರ್ಥಿಗಳು ಅದೃಷ್ಟವನ್ನು ನಂಬಿ ಕೂರದೆ, ಶ್ರಮವಹಿಸಿ ಆಸಕ್ತಿಯಿಂದ, ಶ್ರದ್ಧೆಯಿಂದ, ದೃಢ ನಿರ್ಧಾರದಿಂದ ಕಲಿಕೆಯಲ್ಲಿ ತೊಡಗಿಕೊಂಡಾಗ ಅದೃಷ್ಟವು ತಮ್ಮನ್ನು ಹುಡುಕಿ ಬರುತ್ತದೆ ಎಂದು ಮುಖ್ಯ ಅತಿಥಿಗಳಾದ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಶ್ರೀಮತಿ ಮಾಂಗೇರ ಪದ್ಮಿನಿ ಪೊನ್ನಪ್ಪ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವೇದಿಕೆಯಲ್ಲಿ ಅರಣ್ಯ ಮಹಾ ವಿದ್ಯಾಲಯದ ಡೀನ್ ಸಿ.ಜಿ. ಕುಶಾಲಪ್ಪ, ಸಂತ ಥೋಮಸ್ ಚರ್ಚಿನ ಪಾದ್ರಿಗಳಾದ ಅಲೆಕ್ಸ್, ಸರ್ವದ್ಯೆವತ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಕಾಡ್ಯಮಾಡ ಪ್ರಕಾಶ್ ಮೊಣ್ಣಪ್ಪ, ಸರ್ವದೈವತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಲಲಿತ ಮೊಣ್ಣಪ್ಪ, ಸಂಸ್ಥೆಯ ಆಡಳಿತಾಧಿಕಾರಿ ಆದಿತ್ಯ ಅಯ್ಯಪ್ಪ, ಪ್ರೌಢ ಶಾಲಾ ವಿಭಾಗದ ಮುಖ್ಯೋಪಾದ್ಯಾಯರಾದ ಪ್ರದೀಪ್ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯೋಪಾದ್ಯಾಯಿನಿ ದಿವ್ಯ ತಿಮ್ಮಯ್ಯ ಉಪಸ್ಥಿತರಿದ್ದರು.

ವಿಶೇಷವಾಗಿ ಗಣಿತ ಹಾಗೂ ವಿಜ್ಞಾನ ಮಾದರಿಗಳು ಅಲ್ಲದೆ ವಿವಿಧ ಬಗೆಯ ಕಲಾ ಮಾದರಿಗಳು ಹಾಗೂ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನೋಡುಗರ ಮನ ಸೆಳೆಯಿತು.