ಸಿದ್ದಾಪುರ, ಡಿ. 8: ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ರಸ್ತೆ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ಲೀಲಾವತಿ ಹಾಗೂ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಕೆ. ಸಲಾಂ ಭೂಮಿಪೂಜೆಯನ್ನು ನೆರವೇರಿಸಿದರು.

ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. 24 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರೆವೇರಿಸಿದ ಬಳಿಕ ಬ್ಲಾಕ್ ಅಧ್ಯಕ್ಷ ಆರ್.ಕೆ. ಸಲಾಂ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನಗಳನ್ನು ನೀಡಿದ್ದು ಕುಗ್ರಾಮಗಳ ರಸ್ತೆಗಳು ಅಭಿವೃದ್ಧಿ ಹೊಂದುತ್ತಿದೆ ಎಂದರು.

ಈ ಸಂದರ್ಭ ಜಿ.ಪಂ. ಸದಸ್ಯ ಲೀಲಾವತಿ, ತಾ.ಪಂ. ಸದಸ್ಯೆ ಕಾವೇರಮ್ಮ, ಗ್ರಾ.ಪಂ. ಸದಸ್ಯ ಗಣೇಶ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಹನೀಫ್, ವಲಯ ಕಾಂಗ್ರೆಸ್ ಅಧ್ಯಕ್ಷ ವಾಟೇರಿರ ಸುರೇಶ್ ಸೋಮಯ್ಯ, ಬ್ಲಾಕ್ ಕಾರ್ಯದರ್ಶಿಗಳಾದ ಜಾನ್ಸನ್, ಶರಣು ನಂಜಪ್ಪ, ಯೋಗೇಶ್, ಕಾಂಗ್ರೆಸ್ ಮುಖಂಡರುಗಳಾದ ರಂಗಪ್ಪ, ವಿನ್ಸೆಂಟ್, ಮಹಮ್ಮದ್‍ಆಲಿ, ರಫೀಕ್, ನೌಫಲ್, ಅಶ್ರಫ್ ಇತರರು ಹಾಜರಿದ್ದರು.