ಮಡಿಕೇರಿ, ಡಿ. 8: ಮಡಿಕೇರಿಯ ಬ್ರಹ್ಮಾ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ಲೈಟ್ ಹೌಸ್ ಸಭಾಂಗಣದಲ್ಲಿ ಈಶ್ವರೀಯ ಸೇವೆಯ ವಾರ್ಷಿಕೋತ್ಸವ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಆಗಮಿಸಿ ಶುಭಾಶಯ ಕೋರಿದರು. ರಾಜಯೋಗಿನಿ ಬ್ರಹ್ಮಾಕುಮಾರಿ ಗಾಯತ್ರಿಜೀ ಈಶ್ವರೀಯ ಸಂದೇಶ ನೀಡಿ ಎಸ್‍ಪಿ ಅವರನ್ನು ಸನ್ಮಾನಿಸಿದರು. ಈ ಸಂದರ್ಭ ನಿವೃತ್ತ ಡಿವೈಎಸ್‍ಪಿ ಕೃಷ್ಣಮೂರ್ತಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜಣ್ಣ ಉಪಸ್ಥಿತರಿದ್ದರು.