ಸೋಮವಾರಪೇಟೆ, ಡಿ. 8: ಇಲ್ಲಿನ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿವಿಧ ವಾರ್ಡ್‍ಗಳಲ್ಲಿ ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ನಡೆಯಿತು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಪರಿಶಿಷ್ಟ ಜಾತಿ ಇಲಾಖೆಯ ರಾಜ್ಯ ಸಂಚಾಲಕ ಬಿ.ಈ. ಜಯೇಂದ್ರ ಅಭಿಯಾನದ ನೇತೃತ್ವವನ್ನು ವಹಿಸಿದ್ದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್, ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಪ.ಪಂ. ಸದಸ್ಯರುಗಳಾದ ಕೆ.ಎ. ಆದಂ, ಮೀನಾ ಕುಮಾರಿ, ಬಿ.ಜಿ. ಇಂದ್ರೇಶ್, ಉದಯ ಕುಮಾರ್, ಪಕ್ಷದ ಮುಖಂಡರಾದ ವಿ.ಎ. ಲಾರೆನ್ಸ್, ಟಿ.ಈ. ಸುರೇಶ್, ಈಶ್ವರಚಂದ್ರ ಸಾಗರ್, ಹೆಚ್.ಬಿ. ಮಂಜುನಾಥ್ ಮತ್ತಿತರರು ಭಾಗವಹಿಸಿದ್ದರು.