*ಗೋಣಿಕೊಪ್ಪಲು, ಡಿ. 11: 6ನೇ ವರ್ಷದ ಪುತ್ತರಿ ವೆಳ್ಳಾಟಂ ಅರುವತ್ತೋಕ್ಲು ಮೈಸೂರಮ್ಮ ನಗರದ ಮುತ್ತಪ್ಪ ದೇವಾಲಯದಲ್ಲಿ ನಡೆಯಿತು.

ನೂರಾರು ಸಂಖ್ಯೆಯಲ್ಲಿ ಮುತ್ತಪ್ಪನ ಭಕ್ತರು ದೇವರ ದರ್ಶನ ಪಡೆದು ಪುನೀತರಾದರು. ದೇವರಲ್ಲಿ ತಮ್ಮ ಕಷ್ಟಗಳನ್ನು ಪರಿಹರಿಸುವಂತೆ ಭಕ್ತಾದಿಗಳು ಬೇಡಿಕೊಂಡರು. ನೆರೆದ ಭಕ್ತಾದಿಗಳಿಗೆ ದೇವಾಲಯದ ಆಡಳಿತ ಮಂಡಳಿ ರಾತ್ರಿ ಅನ್ನಸಂತರ್ಪಣೆಯನ್ನು ಏರ್ಪಡಿಸಿದ್ದರು. ಈ ಸಂದರ್ಭ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ್, ಕಾರ್ಯದರ್ಶಿ ಸುರೇಶ್ ಪದಾಧಿಕಾರಿಗಳು ಹಾಜರಿದ್ದರು.