ಗೋಣಿಕೊಪ್ಪ ವರದಿ, ಡಿ. 13: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗೋಣಿಕೊಪ್ಪ ರೊಟರಿ ಸಂಸ್ಥೆ, ಶ್ರೀಮಂಗಲ ಗ್ರಾಮ ಪಂಚಾಯಿತಿ, ಕರುಣಾ ಟ್ರಸ್ಟ್ ಸಹಯೋಗದಲ್ಲಿ ಶ್ರೀಮಂಗಲ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ ನಡೆಯಿತು. ಶ್ರೀಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಜ್ಜಮಾಡ ಮುತ್ತಮ್ಮ ಶಿಬಿರವನ್ನು ಉದ್ಘಾಟಿಸಿದರು. ಸುಮಾರು 19 ಜನರು ಶಿಬಿರದಲ್ಲಿ ರಕ್ತದಾನ ಮಾಡಿದರು. ಶಿಬಿರದಲ್ಲಿ ಗೋಣಿಕೊಪ್ಪ ರೋಟರಿ ಸಂಸ್ಥೆ ಅಧ್ಯಕ್ಷ ಮಚ್ಚಮಾಡ ವಿಜಯ ಬೋಪಯ್ಯ, ಡಿ.ಟಿ.ಓ. ಶಿವಕುಮಾರ್, ತಾ.ಪಂ. ಸದಸ್ಯೆ ಪಿ.ಟಿ. ಸರೋಜ, ವೈದ್ಯಾಧಿಕಾರಿ ಬಿ.ಎಸ್ ಜಯಂತಿ ಹಾಜರಿದ್ದರು.