ಒಡೆಯನಪುರ, ಆಲೂರು-ಸಿದ್ದಾಪುರ, ಡಿ. 16: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಮ್ ಶುಕ್ರವಾರ ಬೆಳಿಗ್ಗೆ ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕೊಡ್ಲಿಪೇಟೆ ಹೋಬಳಿಯ ಬ್ಯಾಡಗೊಟ್ಟ ಗ್ರಾ.ಪಂ.ಗೆ ಸೇರಿದ ಚಿಕ್ಕಗುಂದ ಗ್ರಾಮದ ರಸ್ತೆಯನ್ನು ಅಭಿವೃದ್ಧಿಪಡಿಸಲು ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಿಂದ ರೂ. 1 ಕೋಟಿ 30 ಲಕ್ಷ ಮಂಜೂರಾತಿಯಾಗಿರುವ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಬ್ಯಾಡಗೊಟ್ಟ ಗ್ರಾ.ಪಂ.ಗೆ ಸೇರಿದ ಬೆಂಬಳೂರು ಗ್ರಾಮದ ಎಸ್‍ಸಿ ಕಾಲೋನಿಯಲ್ಲಿ ರೂ. 9 ಲಕ್ಷ 20 ಸಾವಿರ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅಂಬೇಡ್ಕರ್ ಸಮೂದಾಯ ಭವನ. ಹಂಡ್ಲಿ ಗ್ರಾ.ಪಂ.ಗೆ ಸೇರಿದ ಮೂದರವಳ್ಳಿ- ಬಾಗೇರಿ ಗ್ರಾಮದ ರಸ್ತೆ ಅಭಿವೃದ್ಧಿಗಾಗಿ ರೂ. 38 ಲಕ್ಷದ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ ಒಟ್ಟು ರೂ. 1 ಕೋಟಿ 77 ಲಕ್ಷದ 20 ಸಾವಿರ ಅನುದಾನದಲ್ಲಿ ನಿರ್ಮಾಣವಾಗಲಿರುವ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

-ವಿ.ಸಿ.ಸುರೇಶ್ ಒಡೆಯನಪುರ/ ದಿನೇಶ್ ಮಾಲಂಬಿ