ಮಡಿಕೇರಿ, ಡಿ. 19: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವತಿಯಿಂದ ಕರ್ನಾಟಕ 2025- ನನ್ನ ದೂರದೃಷ್ಟಿ ಎಂಬ ವಿಷಯದ ಕುರಿತು ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ನಡೆಯಿತು. ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಗೆ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆ ಇದಾಗಿದ್ದು, ಜಿಲ್ಲೆಯ ಹತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದು ಕಾರ್ಯಕ್ರಮ ನೋಡಲ್ ಅಧಿಕಾರಿ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಎ. ಪಾರ್ವತಿ ಅಪ್ಪಯ್ಯ ತಿಳಿಸಿದ್ದಾರೆ. ಮೌಲ್ಯಮಾಪಕರಾಗಿ ಪತ್ರಕರ್ತರಾದ ದಿನೇಶ್ ಬಿ.ಸಿ., ಎ.ಎಸ್. ಗೋಪಾಲ್ ಸೋಮಯ್ಯ, ಪ್ರಜ್ಞಾ ಜಿ.ಆರ್., ಭಾಗವಹಿಸಿದ್ದರು.

ಜಿಲ್ಲಾ ಮಟ್ಟದ ಅತ್ಯುತ್ತಮ ಕನ್ನಡ ಹಾಗೂ ಆಂಗ್ಲ ಭಾಷಾ ಪ್ರಬಂಧಗಳನ್ನು ರಾಜ್ಯಮಟ್ಟದ ಆಯ್ಕೆಗಾಗಿ ರಾಜ್ಯ ಉನ್ನತ ಶಿಕ್ಷಣ ಸಚಿವಾಲಯಕ್ಕೆ ಕಳುಹಿಸಿಕೊಡಲಾಗುವದು ಎಂದು ಕಾರ್ಯಕ್ರಮ ಸಂಯೋಜಕ, ಇತಿಹಾಸ ವಿಭಾಗದ ಮುಖ್ಯಸ್ಥ ಮೇಜರ್ ರಾಘವ್ ಬಿ. ತಿಳಿಸಿದಾರೆ.