ಸೋಮವಾರಪೇಟೆ, ಡಿ. 19: 2016-17ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ ಉತ್ತೀರ್ಣ ರಾದ ಅರ್ಹ ವೀರಶೈವ ವಿದ್ಯಾರ್ಥಿ ಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಜಿ.ಎಂ. ಕಾಂತರಾಜು ತಿಳಿಸಿದ್ದಾರೆ.

2016-17ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 80 ಕ್ಕಿಂತ ಹೆಚ್ಚು ಅಂಕ ಗಳಿಸಿದ ಕೊಡಗು ಜಿಲ್ಲೆಯ ವೀರಶೈವ ಲಿಂಗಾಯತ ವಿದ್ಯಾರ್ಥಿ ಗಳು ದೃಢೀಕರಿಸಿದ ಅಂಕಪಟ್ಟಿಯ ನಕಲು, ಜಾತಿ ದೃಢೀಕರಣ ಹಾಗೂ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಜನವರಿ 10 ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು ನಂತರ ಬರುವ ಅರ್ಜಿಗಳನ್ನು ಪರಿಗಣಿಸುವದಿಲ್ಲ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಜ. 23 ರಂದು ನಡೆಯುವ ಸಮಾರಂಭದಲ್ಲಿ ಪುರಸ್ಕರಿಸಲಾಗುವದು. ಹೆಚ್ಚಿನ ಮಾಹಿತಿಗಾಗಿ ಮೊ: 9481059223, 9449781248, ಸಂಖ್ಯೆಗಳನ್ನು ಸಂಪರ್ಕಿಸಬಹುದು.