ಮಡಿಕೇರಿ, ಡಿ. 24: ನಗರದ ಗಾಂಧಿ ಮೈದಾನದಲ್ಲಿ ನಗರಸಭೆ ವತಿಯಿಂದ ವಸ್ತು ಪ್ರದರ್ಶನ ಏರ್ಪಡಿಸುತ್ತಿರುವ ಬಗ್ಗೆ ನಗರ ಜಾತ್ಯತೀತ ಜನತಾದಳ ಅಧ್ಯಕ್ಷ ಬಿ.ವೈ. ರಾಜೇಶ್ ಹಾಗೂ ಇತರರು ಆಕ್ಷೇಪಿಸಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ವಸ್ತು ಪ್ರದರ್ಶನದಿಂದ ಪಕ್ಕದ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯ ಹಿನ್ನೆಲೆ ಅವಕಾಶ ನೀಡದಂತೆ ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ.