ಮಡಿಕೇರಿ, ಜ. 3: ಕೊಡಗು ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯದಲ್ಲಿದ್ದ ಎಂ. ಸತೀಶ್ ಕುಮಾರ್ ಅವರನ್ನು ಸರಕಾರ ವರ್ಗಾವಣೆ ಮಾಡಿದ್ದು, ಬೆಂಗಳೂರಿನ ಕಂದಾಯ ಇಲಾಖೆ (ಭೂ ಸ್ವಾಧೀನ) ಸರಕಾರದ ಉಪ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ. ಸತೀಶ್ ಕುಮಾರ್ ಅವರ ಸ್ಥಾನಕ್ಕೆ ಪ್ರಬಾರ ಅಪರ ಜಿಲ್ಲಾಧಿಕಾರಿಯಾಗಿ ಉಪ ವಿಭಾಗಾಧಿಕಾರಿ ನಂಜುಂಡೇಗೌಡ ಅವರನ್ನು ನೇಮಕ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆರ್. ನಾಗರಾಜ್ ಆದೇಶಿಸಿದ್ದಾರೆ.