ಸಿದ್ದಾಪುರ, ಜ. 4: ವಿಜಯಪುರದ ದಲಿತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಹಾಗೂ ದೇಶಾದ್ಯಂತ ದಲಿತ ಮತ್ತು ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ತಾ. 6 ರಂದು ಮಡಿಕೇರಿಯಲ್ಲಿ ಸಮಾನ ಮನಸ್ಕರ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಪ್ರತಿಭಟನಾ ಸಮಾವೇಶಕ್ಕೆ ಎಸ್‍ಡಿಪಿಐ ಪಕ್ಷದ ಸಿದ್ದಾಪುರ ಘಟಕ ಬೆಂಬಲವನ್ನು ಸೂಚಿಸಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಅಧ್ಯಕ್ಷ ಶಾಹುಲ್ ತಿಳಿಸಿದ್ದಾರೆ. ಗೋಷ್ಠಿಯಲ್ಲಿ ಗ್ರಾ.ಪಂ ಸದಸ್ಯರಾದ ಹುಸೈನ್, ಶೌಕತ್ ಅಲಿ, ಪಕ್ಷದ ಪ್ರಮುಖರಾದ ಹನೀಫ್, ಬಶೀರ್ ಇದ್ದರು.