ಮಡಿಕೇರಿ, ಜ. 4: ಗಣಪತಿ ಬೀದಿಯಲ್ಲಿ ನಡೆಯುತ್ತಿದ್ದ ಯುಜಿಡಿ ಕಾಮಗಾರಿಯ ಬಗ್ಗೆ ಅಲ್ಲಿನ ನಗರಸಭಾ ಸದಸ್ಯೆ ಸವಿತ ರಾಕೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ ಕಾಮಗಾರಿಯನ್ನು ಸ್ಥಗಿತಗೊಳಿಸಿದರು. ಈ ಸಂದರ್ಭ ಸ್ಥಳೀಯರು ಕೆಲ ವಾಹನ ಚಾಲಕರು ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿದರು.