ಮಡಿಕೇರಿ, ಜ. 7: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಂತದÀಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ಪಕ್ಷಗಳು ಕೋಮು ಸಂಘÀರ್ಷವನ್ನು ಹುಟ್ಟು ಹಾಕಿ ಹಿಂದು ಹಾಗೂ ಮುಸ್ಲಿಂ ಮತಗಳನ್ನು ಕ್ರೋಢೀಕರಣ ಮಾಡುವ ಕುತಂತ್ರ ರಾಜಕಾರಣದಲ್ಲಿ ತೊಡಗಿವೆ ಎಂದು ಜಾತ್ಯತೀತ ಜನತಾ ದಳÀ ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷÀ ಬಿ.ಹೆಚ್. ಚಂದ್ರಶೇಖರ್ ಆರೋಪಿಸಿ ದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳು ಕೋಮು ಗಲಭೆಗಳನ್ನು ಸೃಷ್ಟಿಸಿ ಜನಸಾಮಾನ್ಯರ ಜೀವದೊಂದಿಗೆ ಆಟವಾಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಾಂತಿ ಸೌಹಾರ್ದತೆಯ ಸಮಾಜ ನಿರ್ಮಾಣದ ಅಗತ್ಯv Éಯನ್ನು ಜನರಲ್ಲಿ ಮನದಟ್ಟು ಮಾಡಿಕೊಡುವ ಉದ್ದೇಶದಿಂದ ಜೆಡಿಎಸ್ ಪಕ್ಷದಿಂದ ಹಿಂದು ಮುಸ್ಲಿಂ ಬಾಂಧವರನ್ನು ಒಳಗೊಂಡ ತಂಡಗಳನ್ನು ರಚಿಸಿ ಜನರ ಬಳಿ ತೆರಳುವದಾಗಿ ತಿಳಿಸಿದರು.

ಮಾಜಿ ಸಚಿವ ಹಾಗೂ ಜಿಲ್ಲಾ ಜೆಡಿಎಸ್ ನಾಯಕ ಬಿ.ಎ. ಜೀವಿಜಯ ಮಾತನಾಡಿ, ಮುಂದಿನ ಮುಖ್ಯಮಂತ್ರಿಗಳಾಗಿ ಹೆಚ್.ಡಿ. ಕುಮಾರಸ್ವಾಮಿ ಅವರು ಆಯ್ಕೆ ಯಾಗಿ ಬರಬೇಕೆನ್ನುವ ಅಭಿಲಾಷೆಯನ್ನು ರಾಜ್ಯದ ಜನತೆ ಹೊಂದಿದ್ದಾರೆ ಎಂದರು. ಪಕ್ಷದ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಮಾತನಾಡಿ, ಜಿಲ್ಲೆÉಯನ್ನು ಎರಡು ರಾಷ್ಟ್ರೀಯ ಪಕ್ಷಗಳು ಅನಾಥವಾಗಿಸಿ ವೆಯೆಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮೈಸೂರು ವಿಭಾಗೀಯ ಕಾರ್ಯಾಧ್ಯಕ್ಷ ವಿ. ನರಸಿಂಹ ಮೂರ್ತಿ, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ, ರಾಜ್ಯ ಕಾರ್ಯದರ್ಶಿ ಡಾ. ಯಾಲದಾಳು ಮನೋಜ್ ಬೋಪಯ್ಯ ಹಾಗೂ ವೀರಾಜಪೇಟೆ ಕ್ಷೇತ್ರದ ಅಧ್ಯಕ್ಷ ಮತೀನ್ ಉಪಸ್ಥಿತರಿದ್ದರು.