ಮೂರ್ನಾಡು, ಜ. 8: ಇಲ್ಲಿಗೆ ಸಮೀಪದ ಅಮ್ಮತಿ-ಒಂಟಿಅಂಗಡಿ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ವೇದಿಕೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.

ಶಾಸಕರ ನಿಧಿಯಿಂದ ರೂ. 2 ಲಕ್ಷ ಅನುದಾನದಲ್ಲಿ ನಿರ್ಮಾಣ ವಾಗಲಿರುವ ಶಾಲಾ ಮೈದಾನದಲ್ಲಿ ವೇದಿಕೆಯ ಪೂಜೆಯನ್ನು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ನೆರವೇರಿಸಿದರು.

ಈ ಸಂದರ್ಭ ವೀರಾಜಪೇಟೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್, ಬಿಜೆಪಿ ಒಂಟಿಅಂಗಡಿ ಸ್ಥಾನೀಯ ಸಮಿತಿ ಅಧ್ಯಕ್ಷ ಬಿ.ಸಿ. ಮಹೇಂದ್ರ, ಬಿಜೆಪಿ ವೀರಾಜಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿ ಕಾಂತಿ ಸತೀಶ್, ಕಣ್ಣಂಗಾಲ ಗ್ರಾಮ ಪಂಚಾಯಿತಿ ಸದಸ್ಯರಾದ ನಿತಿನ್, ರುಕ್ಮಿಣಿ ಇತರರು ಹಾಜರಿದ್ದರು.