ಮಡಿಕೇರಿ, ಜ. 9: ಮಂಗಳೂರು ಆಕಾಶಭವನ ನಿವಾಸಿ ಮೃತ ಬಶೀರ್ ಅವರ ಕುಟುಂಬಕ್ಕೆ ಪರಿಹಾರ ಕೋರಿ ಹಾಗೂ ಕೃತ್ಯದಲ್ಲಿ ಭಾಗಿಯಾಗಿರುವ ಬಜರಂಗದಳವನ್ನು ನಿಷೇಧಿಸಲು ಒತ್ತಾಯಿಸಿ ಮನವಿ ಸಲ್ಲಿಸುವ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು ಎಸ್.ಡಿ.ಪಿ.ಐ. ಕಾರ್ಯಕರ್ತರು ಪ್ರತಿಭಟನೆ ಸಲ್ಲಿಸಿದರು. ಬಳಿಕ ಮುಖ್ಯಮಂತ್ರಿಗಳಿಗೆ ಮನವಿ ರವಾನಿಸಿದರು.

ತಾ. 3 ರಂದು ಕೊಟ್ಟಾರು ಚೌಕಿ ಬಳಿ ಸಂಘ ಪರಿವಾರದ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ತಾ. 7 ರಂದು ನಿಧನರಾದ ಮಂಗಳೂರಿನ ಆಕಾಶಭವನ ನಿವಾಸಿ ಬಶೀರ್ ಹತ್ಯೆಯನ್ನು ಪೂರ್ವ ಯೋಜಿತವಾಗಿ ಮಾಡಿದ ಬಜರಂಗದಳ ಹಾಗೂ ಆರ್.ಎಸ್.ಎಸ್. ಸಂಘಟನೆಯನ್ನು ನಿಷೇಧಿಸುವಂತೆ ಹಾಗೂ ಮೃತರ ಕುಟುಂಬಕ್ಕೆ ಸರಕಾರ ಪರಿಹಾರವಾಗಿ ರೂ. 50 ಲಕ್ಷ ನೀಡುವಂತೆ ಒತ್ತಾಯಿಸಿ ಮಡಿಕೇರಿಯಲ್ಲಿ ಎಸ್.ಡಿ.ಪಿ.ಐ. ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಎಸ್.ಡಿ.ಪಿ.ಐ. ಹಾಗೂ ಇತರ ಪ್ರಮುಖರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.