ನಾಪೋಕ್ಲು, ಜ. 20: ಪ್ರತಿಭೆಗಳು ನಾಡು ಕಟ್ಟುವದರಲ್ಲಿ ಪ್ರಮುಖ ಪಾತ್ರವಹಿಸಬೇಕು ಎಂದು ರಾಜ್ಯ ವಕ್ಫ್ ಮಂಡಳಿಯ ನಿಕಟಪೂರ್ವ ಸದಸ್ಯ ಹಾಗೂ ಎಸ್.ಎಸ್.ಎಫ್.ನ ಮಾಜಿ ರಾಜ್ಯ ಅಧ್ಯಕ್ಷ ಮೌಲನಾ ಶಾಫಿ ಸಅದಿ ಅಭಿಪ್ರಾಯಪಟ್ಟರು. ಕೊಟ್ಟಮುಡಿಯಲ್ಲಿ ನಡೆಯುತ್ತಿರುವ ಎರಡನೇ ದಿನದ ಪ್ರತಿಭೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಎಸ್.ಎಸ್.ಎಫ್. ರಾಜ್ಯ ಅಧ್ಯಕ್ಷ ಎಂ.ಬಿ. ಹಮೀದ್, ಕಿತ್ತಳೆನಾಡು ಸಂಪಾದಕ ಹಂಝತ್ತುಲ್ಲಾ, ಜಿ.ಪಂ. ಸದಸ್ಯ ಪಿ.ಎಂ. ಲತೀಫ್, ಕೊಡಗು ವೆಲ್‍ಫೇರ್ ಅಸೋಸಿಯೇಷನ್ ಅಧ್ಯಕ್ಷ ಅಬೂಬಕರ್ ಕೊಟ್ಟಮುಡಿ ಹಾಗೂ ಇನ್ನಿತರರು ಇದ್ದರು.