ಕುಶಾಲನಗರ, ಜ 22: ಕುಶಾಲನಗರದ ರಥಬೀದಿಯಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಾಸವಿ ವಿಶ್ವರೂಪ ದರ್ಶನ ದಿನದ ಅಂಗವಾಗಿ ವಿಶೇಷ ಪೂಜೆ ನೆರವೇರಿತು. ಕಾರ್ಯಕ್ರಮದ ಅಂಗವಾಗಿ ದೇವರಿಗೆ ವಿಶೇಷ ಪೂಜಾ ವಿಧಿ ವಿಧಾನ, ಹೋಮ ಹವನಗಳು ಜರುಗಿದವು. ದೇವಾಲಯದ ಅರ್ಚಕರಾದ ಸುಬ್ಬುರಾಂ ಭಟ್ ಪೂಜಾ ವಿಧಿ ನೆರವೇರಿಸಿದರು. ಮಧ್ಯಾಹ್ನ ಮಹಾಮಂಗಳಾರತಿ ಬಳಿಕ ಪ್ರಸಾದ ವಿತರಣೆ ನಡೆಯಿತು.