ಕುಶಾಲನಗರ, ಜ. 22: ಕುಶಾಲನಗರ ಪಟ್ಟಣ ಪಂಚಾಯಿತಿ ವತಿಯಿಂದ ನಿರ್ಮಿಸಲು ಉದ್ದೇಶಿಸಲಾಗಿರುವ ನೂತನ ವಾಣಿಜ್ಯ ಸಂಕೀರ್ಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಅಂದಾಜು ರೂ. 7.5 ಕೋಟಿ ವೆಚ್ಚದಲ್ಲಿ ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಾಣವಾಗಲಿರುವ ವಾಣಿಜ್ಯ ಸಂಕೀರ್ಣ ಕಾಮಗಾರಿಗೆ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿಯಲ್ಲಿ ಶಿಲಾನ್ಯಾಸ ನೆರವೇರಿಸಿದ್ದರು. ಈ ಹಿನ್ನೆಲೆ ಪಂಚಾಯಿತಿ ಕಚೇರಿ ಹಿಂಭಾಗದಲ್ಲಿರುವ ಹಳೆಯ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಕ್ರಮ ನಡೆಯಿತು. ಕಳೆದ 19 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಸ್ಥಳೀಯ ಪತ್ರಕರ್ತರ ಸಂಘದ ಕಚೇರಿಯನ್ನು ತೆರವುಗೊಳಿಸುವ ಮೂಲಕ ತೆರವು ಕಾರ್ಯಕ್ಕೆ ಚಾಲನೆ ದೊರೆಯಿತು. ಎಲ್ಲಾ ಅಂಗಡಿ ಮುಂಗಟ್ಟುಗಳು, ವ್ಯಾಪಾರಿಗಳು ತೆರವುಗೊಳಿಸುವ ಕಾರ್ಯಕ್ಕೆ ಕೈಜೋಡಿಸಬೇಕೆಂದು ರೇಣುಕಾ ಮನವಿ ಮಾಡಿದರು. ಈ ಸಂದರ್ಭ ಉಪಾಧ್ಯಕ್ಷ ಟಿ.ಆರ್. ಶರವಣಕುಮಾರ್, ಸದಸ್ಯರುಗಳಾದ ಹೆಚ್.ಜೆ. ಕರಿಯಪ್ಪ, ಫಜಲುಲ್ಲಾ, ಎಂ.ಎಂ. ಚರಣ್, ಪ್ರಮೋದ್ ಮುತ್ತಪ್ಪ ಮೊದಲಾದವರು ಹಾಜರಿದ್ದರು.