ಕುಶಾಲನಗರ, ಜ. 22: ಇಲ್ಲಿಗೆ ಸಮೀಪದ ಮುಳ್ಳುಸೋಗೆ ಗ್ರಾ.ಪಂ. ವ್ಯಾಪ್ತಿಯ ಬಸವೇಶ್ವರ ಬಡಾವಣೆಯ ನಿವಾಸಿಗಳ ಸಮಸ್ಯೆಗಳಿಗೆ ಪಂಚಾಯಿತಿ ಜನಪ್ರತಿನಿಧಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಬಡಾವಣೆ ಹಿತರಕ್ಷಣಾ ಸಮಿತಿ ಆರೋಪ ವ್ಯಕ್ತಪಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಮಿತಿಯ ಪ್ರಮುಖರು ಕುಡಿಯುವ ನೀರು, ಚರಂಡಿ, ರಸ್ತೆ ನಿರ್ಮಾಣ ಸೌಲಭ್ಯ ಕಲ್ಪಿಸಲು ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗದೆ ಶಾಸಕರ ನಿಧಿಯಿಂದ ಕುಡಿಯುವ ನೀರಿಗಾಗಿ ಕೊಳವೆ ಬಾವಿ ತೆಗೆಸಿ ಸಮಿತಿ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ. ಆದರೆ ಪಂಚಾಯಿತಿ ಸದಸ್ಯರು ವಿನಾಕಾರಣ ಸಮಿತಿ ಮೇಲೆ ಕಿರುಕುಳ ನೀಡುತ್ತಿರುವ ಕುಶಾಲನಗರ, ಜ. 22: ಇಲ್ಲಿಗೆ ಸಮೀಪದ ಮುಳ್ಳುಸೋಗೆ ಗ್ರಾ.ಪಂ. ವ್ಯಾಪ್ತಿಯ ಬಸವೇಶ್ವರ ಬಡಾವಣೆಯ ನಿವಾಸಿಗಳ ಸಮಸ್ಯೆಗಳಿಗೆ ಪಂಚಾಯಿತಿ ಜನಪ್ರತಿನಿಧಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಬಡಾವಣೆ ಹಿತರಕ್ಷಣಾ ಸಮಿತಿ ಆರೋಪ ವ್ಯಕ್ತಪಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಮಿತಿಯ ಪ್ರಮುಖರು ಕುಡಿಯುವ ನೀರು, ಚರಂಡಿ, ರಸ್ತೆ ನಿರ್ಮಾಣ ಸೌಲಭ್ಯ ಕಲ್ಪಿಸಲು ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗದೆ ಶಾಸಕರ ನಿಧಿಯಿಂದ ಕುಡಿಯುವ ನೀರಿಗಾಗಿ ಕೊಳವೆ ಬಾವಿ ತೆಗೆಸಿ ಸಮಿತಿ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ. ಆದರೆ ಪಂಚಾಯಿತಿ ಸದಸ್ಯರು ವಿನಾಕಾರಣ ಸಮಿತಿ ಮೇಲೆ ಕಿರುಕುಳ ನೀಡುತ್ತಿರುವ ಲಾಗುವದು ಎಂದು ಎಚ್ಚರಿಕೆ ನೀಡಿದ್ದಾರೆ. ಮುಳ್ಳುಸೋಗೆ ಗ್ರಾ.ಪಂ. ವ್ಯಾಪ್ತಿಯ ಬಡಾವಣೆಯ ಸಮಸ್ಯೆಗಳಿಗೆ ಪ್ರತಿಕ್ರಿಯಿಸಿರುವ ಪಂಚಾಯಿತಿ ಅಧ್ಯಕ್ಷೆ ಭವ್ಯ ಪಂಚಾಯಿತಿಯ 6 ವಾರ್ಡ್ ಗಳಿಗೆ ಅನುದಾನ ಮೂಲಕ ಸಮನಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಬಡಾವಣೆಯ ಸಮಸ್ಯೆಗಳ ಬಗ್ಗೆ ತನ್ನ ಗಮನಕ್ಕೆ ಬಂದಿಲ್ಲ ಈ ಬಗ್ಗೆ ಪರಿಶೀಲನೆ ನಡೆಸಲಾಗುವದು ಎಂದು ಸ್ಪಷ್ಟನೆ ನೀಡಿದ್ದಾರೆ.

ಗೋಷ್ಠಿಯಲ್ಲಿ ಸಮಿತಿ ಕಾರ್ಯದರ್ಶಿ ರವಿಕುಮಾರ್, ನಿರ್ದೇಶಕರಾದ ಪಿ.ಕೆ. ಲಕ್ಷ್ಮಣ, ರವಿ ಮತ್ತು ಲವಕುಮಾರ್ ಹಾಗೂ ಸ್ಥಳೀಯ ನಿವಾಸಿಗಳು ಇದ್ದರು.