ಸೋಮವಾರಪೇಟೆ, ಜ. 23: ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ಇಲ್ಲಿನ ಸಂತ ಜೋಸೆಫರ ಪದವಿ ಕಾಲೇಜು ಆವರಣ ದಲ್ಲಿ ಯುವ ಜನೋತ್ಸವ ದಿನಾಚರಣೆ ಬಗ್ಗೆ ಕಾನೂನು ಅರಿವು ಕಾರ್ಯಾಗಾರ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಫ್. ದೊಡ್ಡಮನಿ ಕಾರ್ಯಾಗಾರ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ವಹಿಸಿದ್ದರು. ಸಿವಿಲ್ ನ್ಯಾಯಾಧೀಶ ಶ್ಯಾಮ್ ಪ್ರಕಾಶ್, ಸಂತ ಜೋಸೆಫರ ಕಾಲೇಜಿನ ಪ್ರಾಂಶುಪಾಲ ರಾಯಪ್ಪ, ಟೆನ್ನಿ ಕುರಿಯನ್ ಉಪಸ್ಥಿತರಿದ್ದರು.