ಸೋಮವಾರಪೇಟೆ, ಜ. 24: ಇಲ್ಲಿನ ಮಹದೇಶ್ವರ ಬ್ಲಾಕ್‍ನ ಅಶೋಕ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಅಪ್ಪಚ್ಚುರಂಜನ್ ಉದ್ಘಾಟಿಸಿದರು.

ಚಾಲನೆ ನೀಡಿದ ಬಳಿಕ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಶಾಸಕರು ಸಿಹಿ ವಿತರಿಸುವ ಮೂಲಕ ಶುಭ ಕೋರಿದರು. ಈ ಸಂದರ್ಭ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮಿ ಸುರೇಶ್, ಸ್ಥಾಯಿ ಸಮಿತಿ ಅಧ್ಯಕ್ಷೆ ಸುಷ್ಮಾ ಸುಧಾಕರ್, ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ಬಿ.ಎಂಸುರೇಶ್, ಸುಶೀಲಾ, ಈಶ್ವರ್, ನಾಮ ನಿರ್ದೇಶಿತ ಸದಸ್ಯ ಹೆತ್ತೂರು ರಾಜಣ್ಣ, ಮುಖ್ಯಾಧಿಕಾರಿ ನಾಚಪ್ಪ, ಕಿರಿಯ ಅಭಿಯಂತರ ವಿರೇಂದ್ರ, ಆರೋಗ್ಯ ನಿರೀಕ್ಷಕ ಉದಯಕುಮಾರ್, ಆಟೋ ಚಾಲಕರ ಸಂಘದ ಅಧ್ಯಕ್ಷ ಮೋಹನ್ ಮತ್ತಿತರರು ಇದ್ದರು.