ಗೋಣಿಕೊಪ್ಪಲು, ಜ. 24: ಇಲ್ಲಿನ ಕಾವೇರಿ ಕಾಲೇಜು ವತಿಯಿಂದ ತಾ. 28 ರಂದು ಕೊಡಗಿನ ವೀರ ಸೇನಾನಿ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪನವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಅಂದು ಬೆಳಿಗ್ಗೆ 9.30 ಗಂಟೆಗೆ ಕಾವೇರಿ ಕಾಲೇಜು ಆವರಣದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಗೋಣಿಕೊಪ್ಪಲಿನ ಉಮಾಮಹೇಶ್ವರಿ ದೇವಸ್ಥಾನದಿಂದ ಹಾತೂರಿನ ವನ ಭದ್ರಕಾಳಿ ದೇವಸ್ಥಾನದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಇನ್ನಿತರ ಕಸಗಳನ್ನು ತೆಗೆದು ಸ್ವಚ್ಛ ಮಾಡುವ ಮೂಲಕ ಕಾರ್ಯಪ್ಪನವರ ಜಯಂತಿಯನ್ನು ವಿಭಿನ್ನವಾಗಿ ಆಚರಿಸಲಾಗುವದು. ಈ ಕಾರ್ಯಕ್ಕೆ ಕೈಕೇರಿಯ ಭಗವತಿ ಕ್ಲಬ್‍ನವರು ಕೈಜೋಡಿಸಲಿದ್ದು, ಕಾವೇರಿ ಕಾಲೇಜಿನ ಸಿಬ್ಬಂದಿವರ್ಗ, ಎನ್‍ಎಸ್‍ಎಸ್, ಎನ್‍ಸಿಸಿ ಹಾಗೂ ರೋವರ್ ರೇಂಜರ್ ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಲಿವೆ ಎಂದು ಪ್ರಾಂಶುಪಾಲ ಪಟ್ಟಡ ಪೂವಣ್ಣ ತಿಳಿಸಿರುತ್ತಾರೆ.