ಒಡೆಯನಪುರ, ಜ. 25: ಕರ್ನಾಟಕ ಜಾನಪದ ಪರಿಷತ್ತಿನ ಶನಿವಾರಸಂತೆ ಹೋಬಳಿ ಘಟಕ ಮತ್ತು ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ಫೆ. 3 ರಂದು ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜಾನಪದ ಜಾತ್ರೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಜಾನಪದ ಜಾತ್ರೆಯ ಲಾಂಛನವನ್ನು ಬಿಡುಗಡೆ ಗೊಳಿಸಲಾಯಿತು

ಲಾಂಛನವನ್ನು ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರಸಂತೆ ಜಾನಪದ ಪರಿಷತ್ ಘಟಕದ ಅಧ್ಯಕ್ಷೆ ಡಿ. ಸುಜಲಾದೇವಿ ಬಿಡುಗಡೆಗೊಳಿಸಿದರು. ಈ ಸಂದರ್ಭ ಘಟಕದ ಉಪಾಧ್ಯಕ್ಷ ದಿನೇಶ್ ಮಾಲಂಬಿ, ಘಟಕದ ಸಂಚಾಲಕ ವಿ.ಸಿ. ಸುರೇಶ್ ಒಡೆಯನಪುರ, ಘಟಕದ ಖಜಾಂಜಿ ಗುರುಪ್ರಸಾದ್ ಹಾಗೂ ಘಟಕದ ನಿರ್ದೇಶಕ ಸಿ.ಎಸ್.ಸತೀಶ್ ಹಾಜರಿದ್ದರು.