ಸೋಮವಾರಪೇಟೆ,ಜ.24: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾ. 26ರಂದು (ನಾಳೆ) 10 ಗಂಟೆಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ 69ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದೆ ಎಂದು ತಾಲೂಕು ತಹಶೀಲ್ದಾರ್ ಪಿ.ಎಸ್. ಮಹೇಶ್ ತಿಳಿಸಿದ್ದಾರೆ.

ತºಶೀಲ್ದಾರ್ ಧ್ವಜಾರೋಹಣ ನೆರವೇರಿಸಲಿದ್ದು, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸೀತಾರಾಂ, ಸಂಸದ ಪ್ರತಾಪ್ ಸಿಂಹ, ಎಂಎಲ್‍ಸಿಗಳಾದ ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ, ಜಿ.ಪಂ. ಅಧ್ಯಕ್ಷ ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಅಧ್ಯಕ್ಷೆ ಪುಷ್ಪಾ ರಾಜೇಶ್, ಉಪಾಧ್ಯಕ್ಷ ಅಭಿಮನ್ಯುಕುಮಾರ್, ಪ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ, ಚೌಡ್ಲು ಗ್ರಾ.ಪಂ. ಅಧ್ಯಕ್ಷೆ ವನಜ, ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್, ತಾ.ಪಂ. ಸದಸ್ಯೆ ತಂಗಮ್ಮ ಅವರುಗಳು ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ಅಭಿಮಠ ಬಾಚಳ್ಳಿ ಗ್ರಾಮದ ಮಾಜಿ ಸೈನಿಕ ಎ.ಕೆ. ಮಾಚಯ್ಯ, ಮಸಗೋಡು ಗ್ರಾಮದ ಎಂ.ಎಸ್. ಹನುಮಂತಪ್ಪ ಅವರುಗಳನ್ನು ಸನ್ಮಾನಿಸಲಾಗುವದು ಎಂದು ಮಾಹಿತಿ ನೀಡಿದ್ದಾರೆ.