ಸೋಮವಾರಪೇಟೆ,ಜ.25: ಜಾತ್ಯತೀತ ಜನತಾದಳದ ಗೌಡಳ್ಳಿ ಹಾಗೂ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಲಯ ಮಟ್ಟದ ಕಾರ್ಯಕರ್ತರ ಸಭೆ ತಾ. 27 ರಂದು ಗೌಡಳ್ಳಿ ಶ್ರೀನವದುರ್ಗಾ ಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪಕ್ಷದ ಕ್ಷೇತ್ರ ವಕ್ತಾರ ಎ.ಜೆ. ಕೃಷ್ಣಪ್ಪ ತಿಳಿಸಿದ್ದಾರೆ.