ಸೋಮವಾರಪೇಟೆ, ಜ. 25: ಪಾದಚಾರಿ ಮಹಿಳೆಗೆ ಕಾರು ಡಿಕ್ಕಿಯಾಗಿ ಗಾಯಗೊಂಡಿರುವ ಘಟನೆ ಸಮೀಪದ ಶಾಂತಳ್ಳಿ ಗ್ರಾಮದಲ್ಲಿ ನಡೆದಿದೆ.

ಶಾಂತಳ್ಳಿ ಗ್ರಾಮದ ಕೆ.ಎಸ್. ಪ್ರಸಾದ್ ಅವರ ತಾಯಿ ಚಂದ್ರಾವತಿ ಅವರು ಮನೆ ಕಡೆಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಸಂದರ್ಭ ಮಾರುತಿ ಆಲ್ಟೋ ಕಾರನ್ನು ಚಾಲಕ ಅತೀವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಡಿಕ್ಕಿ ಪಡಿಸಿದ್ದಾನೆ.

ಪರಿಣಾಮ ಚಂದ್ರಾವತಿ ಅವರ ತಲೆ, ಬಲಗೈ, ಬೆನ್ನಿನ ಭಾಗಕ್ಕೆ ಪೆಟ್ಟಾಗಿದ್ದು, ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.