ಮಡಿಕೇರಿ, ಜ. 25: ಶಿರಾಡಿಘಾಟ್ ಭಾಗದ ಹೆದ್ದಾರಿಯನ್ನು ದುರಸ್ತಿಪಡಿಸುವ ಸಂಬಂಧ ಈ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚುವ (ಬಂದ್ ಮಾಡುವ) ಹಿನ್ನೆಲೆ ಕೊಡಗು ಜಿಲ್ಲೆಯ ರಸ್ತೆಗಳಲ್ಲಿ ಅಧಿಕ ಭಾರದ ಮತ್ತು ಲಾಂಗ್ ಚಾಸಿಸ್ ವಾಹನಗಳು ಸಂಚರಿಸುವದರಿಂದ ಸಾರ್ವಜನಿಕ ಮತ್ತು ಸುರಕ್ಷತೆಗೆ ಧಕ್ಕೆಯಾಗುವ ಸಂಭವವಿರುವದರಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ವಿಧಿ 31ರಂತೆ ಮತ್ತು ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ(5)ರಲ್ಲಿ ಪ್ರದತ್ತವಾದ ಅಧಿಕಾರದಂತೆ ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆ-ಮಡಿಕೇರಿ-ಸುಂಟಿಕೊಪ್ಪ-ಕುಶಾಲನಗರ ಮಾರ್ಗದಲ್ಲಿ ಬೆಳಿಗ್ಗೆ 6 ರಿಂದ ರಾತ್ರಿ 9 ಗಂಟೆಯವರೆಗೆ ಭಾರೀ ವಾಹನಗಳ ಸಂಚಾರವನ್ನು ತಾ. 20 ರಿಂದ ಮುಂದಿನ ಆದೇಶದವರೆಗೆ ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ, ಪಿ.ಐ. ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ.