ಮಡಿಕೇರಿ, ಜ. 25: ಕಡಂಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಆವಿಷ್ಕಾರ ಅಭಿಯಾನ ಇತ್ತೀಚೆಗೆ ನಡೆಯಿತು. ವಿದ್ಯಾರ್ಥಿಗಳಿಗೆ ವಿಜ್ಞಾನ, ಗಣಿತ, ತಂತ್ರಜ್ಞಾನ ವಿಷಯಗಳ ಆವಿಷ್ಕಾರ ಕುರಿತು ಮಾಹಿತಿ ನೀಡಲಾಯಿತು. ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ತಾವು ವಿಶೇಷವಾಗಿ ತಯಾರಿಸಿದ ಕಲಿಕೋಪಕರಣಗಳು ಮತ್ತು ಮಾದರಿಗಳನ್ನು ಅರ್ಥಪೂರ್ಣವಾಗಿ ಜೋಡಿಸಿ, ವಿವರಿಸಿದ್ದು ಎಲ್ಲರ ಗಮನ ಸೆಳೆಯುವಂತಿತ್ತು. ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಮುಖ್ಯ ಶಿಕ್ಷಕಿ ವೈ.ಎ. ತಂಗಮ್ಮ ಆಯುರ್ವೇದ ವೈದ್ಯಾಧಿಕಾರಿ ಶೈಲಜಾ, ಗ್ರಾ.ಪಂ. ಸದಸ್ಯರು ಇತರರು ಭಾಗವಹಿಸಿದ್ದರು.