ವೀರಾಜಪೇಟೆ, ಜ. 26: ಬಲಮುರಿಯ ದಿವ್ಯಜ್ಯೋತಿ ಯುವಕ ಸಂಘದ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನವನ್ನು ಕಾಡು ಕಡಿದು ಶ್ರಮದಾನದ ಮೂಲಕ ಶುಚಿಗೊಳಿಸಿಲಾಯಿತು. ಶ್ರಮದಾನದಲ್ಲಿ ಸಂಘದ ಸದಸ್ಯರು ಭಾಗವಹಿಸಿದ್ದರು.
ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.