ಸೋಮವಾರಪೇಟೆ, ಜ. 27: ಇಲ್ಲಿನ ಕೊಡವ ಸಮಾಜದ ವತಿಯಿಂದ ತಾ. 31 ರಂದು ಸಮಾಜದ ಸಭಾಂಗಣದಲ್ಲಿ ಹರದಾಸ ಅಪ್ಪಚ್ಚ ಕವಿಯ 150ನೇ ಜನ್ಮ ದಿನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯು ಕುಮಾರ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಅಖಿಲ ಕೊಡವ ಸಮಾಜದ ಅಧ್ಯಕ್ಷ ಮಾತಂಡ ಸಿ. ಮೊಣ್ಣಪ್ಪ, ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಸಾಹಿತಿ ಕಲ್ಲೇಂಗಡ ಅಪ್ಪಚ್ಚು, ಕುಶಾಲನಗರ ಕೊಡವ ಸಮಾಜದ ಮಾಜಿ ಅಧ್ಯಕ್ಷ ಚೇಂದಂಡ ಜೆಮ್ಸಿ ಪೊನ್ನಪ್ಪ, ಸಂಸ್ಕøತಿ ಚಿಂತಕಿ ಮಣವಟ್ಟೀರ ಶಾರದ ಮಂದಣ್ಣ ಭಾಗವಹಿಸಲಿದ್ದಾರೆ.

ಹಿರಿಯ ರಂಗಕರ್ಮಿ ಅಡ್ಡಂಡ ಸಿ. ಕಾರ್ಯಪ್ಪ ದಿನದ ಮಹತ್ವದ ಕುರಿತು ಮಾಹಿತಿ ನೀಡಲಿದ್ದಾರೆ.