ಕುಶಾಲನಗರ, ಜ. 27: ಕುಶಾಲನಗರ ಕಾವೇರಿ ಜೆ.ಸಿ.ಐ. ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು. ಕುಶಾಲನಗರ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 2017-18ನೇ ಸಾಲಿನ ಅಧ್ಯಕ್ಷರಾಗಿ ಕೆ. ಪ್ರವೀಣ್ ಮತ್ತು ಅವರ ತಂಡದ ಸದಸ್ಯರಿಗೆ ಅಧಿಕಾರ ಹಸ್ತಾಂತರಿಸಿ ಪ್ರಮಾಣ ವಚನ ಬೋಧಿಸಲಾಯಿತು.

ಜೆಸಿಐ 14ನೇ ವಲಯದ ಉಪಾಧ್ಯಕ್ಷ ಜೆಪಿನ್ ಜಾಯ್ ಪ್ರಮಾಣ ವಚನ ಬೋಧಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ಕ್ಯಾತೆಗೌಡ ಮತ್ತು ಪೊಲೀಸ್ ಉಪ ನಿರೀಕ್ಷಕರಾದ ಜಗದೀಶ್ ಮಾತನಾಡಿ ಶುಭಾಶಯ ಕೋರಿದರು.

ಕುಶಾಲನಗರ ಜೆಸಿಐ ಸ್ಥಾಪಕ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್, ನಿಕಟಪೂರ್ವ ಅಧ್ಯಕ್ಷರಾದ ನಂದೀಶ್ ಕುಮಾರ್, ಡಿ. ಪುನೀತ್, ಕಾರ್ಯದರ್ಶಿ ಸುಜಯ್ ನಾಗ್, ಕವಿತಾ ಪ್ರವೀಣ್ ಮತ್ತಿತರರು ಇದ್ದರು. ಈ ಸಂದರ್ಭ 8 ಮಂದಿ ನೂತನ ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು.