ಮಡಿಕೇರಿ, ಜ. 27: ಮಡಿಕೇರಿ ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ನಿಂದ ಸಾಲ ಪಡೆದು ಹಾಲಿ ಸಾಲಗಾರರ ಸುಸ್ತಿದಾರರಲ್ಲದ ಸದಸ್ಯರುಗಳ ಮಕ್ಕಳು 2015-16ನೇ ಮತ್ತು 2016-17ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ದ್ವಿತೀಯ ಪಿ.ಯು.ಸಿ. ಮತ್ತು ಪದವಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದವರನ್ನು ಬ್ಯಾಂಕಿನ ವತಿಯಿಂದ ಸನ್ಮಾನ ಮಾಡಲಾಯಿತು.

ಈ ಸಂದರ್ಭ ಬ್ಯಾಂಕಿನ ಅಧ್ಯಕ್ಷ ಮನು ಮುತ್ತಪ್ಪ ಹಾಗೂ ಆಡಳಿತ ಮಂಡಳಿ ಸದಸ್ಯರು, ವ್ಯವಸ್ಥಾಪಕರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.