ಸಿದ್ದಾಪುರ, ಜ. 27: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ಸುನೀತಾ ಮಂಜುನಾಥ್ ಭೂಮಿ ಪೂಜೆ ನೆರೆವೇರಿಸಿದರು. ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ನೆಲ್ಯಹುದಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಚರಂಡಿ ನಿರ್ಮಾಣಕ್ಕೆ ರೂ. 1.50 ಲಕ್ಷ ವೆಚ್ಚದ ಕಾಮಗಾರಿಗೆ ಹಾಗೂ ನೆಲ್ಲಿಹುದಿಕೇರಿಯ ಶಾದಿಮಹಲ್‍ನ ಶೌಚಾಲಯ ನಿರ್ಮಾಣಕ್ಕೆ ರೂ. 1.50 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರೆವೇರಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ, ಗ್ರಾ.ಪಂ. ಸದಸ್ಯರುಗಳಾದ ಹಕ್ಕಿಂ, ಮುಸ್ತಫ, ಸುಕೂರ್, ಧನಲಕ್ಷ್ಮಿ, ಮಾಜಿ ತಾ.ಪಂ. ಅಧ್ಯಕ್ಷ ವಿ.ಕೆ. ಲೋಕೇಶ್, ಶ್ರೀ ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಪಿ.ಡಿ. ಚೀಯಣ್ಣ, ಇತರರು ಹಾಜರಿದ್ದರು.