*ಗೋಣಿಕೊಪ್ಪಲು, ಜ. 28: ಸ್ಥಳೀಯ ಕಾವೇರಿ ಕಾಲೇಜಿನ ಆವರಣದಲ್ಲಿ ನಿರ್ಮಾಣಗೊಂಡಿರುವ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಪ್ರತಿಮೆಗಳ ಮೇಲ್ಛಾವಣಿ ನಿರ್ಮಾಣಕ್ಕೆ ತಮ್ಮ ಶಾಸಕ ನಿಧಿಯಿಂದ ಕಾನೂನಿನಂತೆ ಅನುದಾನ ನೀಡಲು ಕ್ರಮಕೈಗೊಳ್ಳಲಾಗುವದು ಎಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.ಕನ್ನಡ ಮತ್ತು ಸಂಸ್ಕøತಿ ಇಲಾಖೆ,ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಫೋರಂ ವತಿಯಿಂದ ಇಲ್ಲಿನ ಕಾವೇರಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಪ್ಪ ಅವರ 119ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು ದೇಶಕಂಡ ಮಹಾನ್ ಚೇತನ ಕಾರ್ಯಪ್ಪ ಅವರ ಸಾಧನೆ ಮತ್ತು ಶಿಸ್ತು ಯುವ ಜನಾಂಗಕ್ಕೆ ದಾರಿದೀಪವಾಗಬೇಕು ಕಾರ್ಯಪ್ಪ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂಬರುವ ವಿಧಾನ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಬಗ್ಗೆ ಚರ್ಚಿಸಲಾಗುವದು ಎಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ಪ್ರತಿಮೆ ಸುತ್ತ ತಡೆಗೋಡೆ ನಿರ್ಮಾಣಕ್ಕೆ ಜಿಲ್ಲಾ ಪಂಚಾಯಿತಿ ವತಿಯಿಂದ ಅನುದಾನ ನೀಡಬೇಕು. ಪ್ರತಿಮೆಗಳ ಮೇಲ್ಚಾವಣಿಗೂ ಅನುದಾನದ ಅಗತ್ಯವಿದೆ. ಇದರ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಬೇಕು ಎಂದು ಜಿ.ಪಂ. ಸದಸ್ಯ

(ಮೊದಲ ಪುಟದಿಂದ) ಸಿ.ಕೆ.ಬೋಪಣ್ಣ ಅವರಿಗೆ ಸೂಚಿಸಿದ ಬೋಪಯ್ಯ ಪ್ರತಿಮೆಗಳ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿಗೆ ವಹಿಸುವದರ ಬದಲು ಪ್ರತ್ಯೇಕ ಫೋರಂ ರಚಿಸುವದು ಅಗತ್ಯ ಎಂದು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಫೋರಂ ಸಂಚಾಲಕ ಮೇಜರ್ ಬಿ.ಎ.ನಂಜಪ್ಪ ಮಾತನಾಡಿ ಕಾವೇರಿ ಕಾಲೇಜಿನ ಆವರಣದಲ್ಲಿ ನಿರ್ಮಾಣವಾಗಿರುವ ಪ್ರತಿಮೆಗಳ ನಿರ್ವಹಣಾ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿ ವಹಿಸಿಕೊಳ್ಳಬೇಕು. ಪ್ರತಿಮೆಗಳ ಮೇಲಿನ ಚಾವಣಿ ನಿರ್ಮಾಣಕ್ಕೆ ಅಂದಾಜು ರೂ.12 ಲಕ್ಷ ವೆಚ್ಚವಾಗಲಿದೆ. ಇದನ್ನು ಸರ್ಕಾರ ನೀಡಬೇಕು. ಪ್ರತಿವರ್ಷ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಡಿಕೇರಿ ಮತ್ತು ಗೋಣಿಕೊಪ್ಪಲಿನಲ್ಲಿ ಕಾರ್ಯಪ್ಪ ಜಯಂತಿ ನಡೆಯುವಂತಾಗಬೇಕು ಎಂದು ಒತ್ತಾಯಿಸಿದರು.

ಕಾರ್ಯಪ್ಪ ಅವರ ಜೀವನ ಚರಿತ್ರೆ ಕುರಿತು ಮಾತನಾಡಿದ ನಿವೃತ್ತ ಪ್ರಾಂಶುಪಾಲ ಪ್ರೊ.ಇಟ್ಟೀರ ಬಿದ್ದಪ್ಪ ಕಾರ್ಯಪ್ಪ ಅವರ ಜೀವನ ಸಾಧನೆಯನ್ನು ಅರಿತುಕೊಳ್ಳಲು ಉಪನ್ಯಾಸ ಹಾಗೂ ಚರ್ಚಾಗೋಷ್ಠಿಗಳು ನಡೆಯಬೇಕು ಎಂದರು.

ಸಿಪಿಐ ದಿವಾಕರ್ ಮಾತನಾಡಿ ಕಾರ್ಯಪ್ಪ ಅವರು ಒಮ್ಮೆ ಅನಾರಾಗ್ಯ ನಿಮಿತ್ತ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆಗಲೂ ಅವರು ತಮ್ಮ ಸಮವಸ್ತ್ರ ತೆಗೆದಿರಲಿಲ್ಲ. ಅವರನ್ನು ನೋಡಲು ಅಂದಿನ ರಕ್ಷಣಾ ಸಚಿವರು ಆಸ್ಪತ್ರೆಗೆ ಬಂದಿದ್ದಾಗ ಅವರಿಗೆ ಎದ್ದುನಿಂತು ಸೆಲ್ಯೂಟ್ ಹೊಡೆದು ಗೌರವಿಸಿದರು. ಅಂತಹ ಮೇರು ವ್ಯಕಿತ್ವ ಅವರದು ಎಂದು ಗುಣಗಾನ ಮಾಡಿದರು.

ತಹಶೀಲ್ದಾರ್ ಆರ್.ಗೋವಿಂದರಾಜು, ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಕೆ.ಬೋಪಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೆಲ್ವಿ, ಆರ್‍ಎಸ್‍ಎಸ್ ಮುಖಂಡ ಅವಿನಾಶ್, ಕೊಡಂದೇರ ಕುಟುಂಬದ ಅಧ್ಯಕ್ಷ ಸುಬ್ಬಯ್ಯ, ವೀರಾಜಪೇಟೆ ಪ.ಪಂ. ಅಧ್ಯಕ್ಷ ಇ.ಸಿ. ಜೀವನ್, ಕಬ್ಬಚ್ಚೀರ ಪ್ರಭು ಸುಬ್ರಮಣಿ, ಲೋಹಿತ್ ಭೀಮಯ್ಯ, ಟಿ.ಬಿ.ಜೀವನ್, ಗಿರೀಶ್ ಗಣಪತಿ ಮತ್ತಿತರ ಪ್ರಮುಖರು ಇದ್ದರು.

ತಾಲೂಕಿನ ಶಾಲಾ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ಬೆಳಿಗ್ಗೆ 9.30 ಗಂಟೆಗೆ ಸ್ಥಳೀಯ ಬಸ್ ನಿಲ್ದಾಣದಿಂದ ಶಿಸ್ತುಬದ್ಧ ಮೆರವಣಿಗೆ ನಡೆಸಿದರು. ಜಯಂತಿ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರಗೀತೆ ಸ್ಪರ್ಧೆಯ ಪ್ರಾಥಮಿಕ ವಿಭಾಗದಲ್ಲಿ ಗೋಣಿಕೊಪ್ಪಲಿನ ಲಯನ್ಸ್ ಶಾಲೆ ಪ್ರಥಮ, ಅರುವತ್ತೊಕ್ಕಲಿನ ಸರ್ವದೈವತಾ ಶಾಲೆ ದ್ವಿತೀಯ ಅಮ್ಮತ್ತಿ ಸರ್ಕಾರಿ ಪ್ರಾಥಮಿಕ ಶಾಲೆ ತೃತೀಯ ಸ್ಥಾನ ಪಡೆದುಕೊಂಡಿತು.ಪ್ರೌಢಶಾಲೆ ವಿಭಾಗದಲ್ಲಿ ವೀರಾಜಪೇಟೆ ಅರಮೇರಿಯ ಎಸ್‍ಎಂಎಸ್ ಅಕಾಡೆಮಿ ಶಾಲೆ ಪ್ರಥಮ, ಪೊನ್ನಂಪೇಟೆ ಸೆಂಟ್ ಅಂಥೋಣಿ ಶಾಲೆ ದ್ವಿತೀಯ, ಗೋಣಿಕೊಪ್ಪಲಿನ ಲಯನ್ಸ್ ಶಾಲೆ ತೃತೀಯ ಸ್ಥಾನ ಪಡೆಯಿತು.ಕಾಲೇಜು ವಿಭಾಗದಲ್ಲಿ ಪೊನ್ನಂಪೇಟೆ ಸೇಂಟ್ ಅಂಥೋಣಿ ಪಿಯು ಕಾಲೇಜು ಪ್ರಥಮ ಸ್ಥಾನ ಪಡೆಯಿತು. - ವರದಿ ಎನ್. ಎನ್.ದಿನೇಶ್/ ಜಗದೀಶ್.