ಶ್ರೀಮಂಗಲ, ಜ. 29: ಕೊಡಗು ಜಿಲ್ಲೆಯ ಮೂಲಕ ರೈಲ್ವೆ ಮಾರ್ಗ ರೂಪಿಸುವದನ್ನು ವಿರೋಧಿಸಿ ಫೆÉ. 18ರಂದು ಮೈಸೂರಿನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ ರ್ಯಾಲಿಗೆ ಮೈಸೂರಿನ ಜನರು ಬೆಂಬಲ ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ಕೊಡವ ಸಹಕಾರ ಸಂಘದಲ್ಲಿ ಪೂರ್ವಭಾವಿ ಸಭೆ ನಡೆಯಿತು.ಕೊಡಗು ರೈಲ್ವೆ ವಿರೋಧಿ ಹೋರಾಟ ವೇದಿಕೆ ವತಿಯಿಂದ ನಡೆದ ಸಭೆಯಲ್ಲಿ ರೈಲ್ವೆ ಮಾರ್ಗವು ಕೊಡಗು ಜಿಲ್ಲೆಯ ಮೂಲಕ ರೂಪಿಸುವದರಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ಪ್ರಮುಖರು ಅಭಿಪ್ರಾಯಪಟ್ಟು ಯಾವದೇ ಕಾರಣಕ್ಕೆ ರೈಲ್ವೆ ಯೋಜನೆಗೆ ಅವಕಾಶ ನೀಡದಂತೆ ಹೋರಾಟ ನಡೆಸಲು ನಿರ್ಧರಿಸಲಾಯಿತು.

ಸಭೆಯಲ್ಲಿ ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಚೊಟ್ಟೆಕ್‍ಮಾಡ ರಾಜೀವ್ ಬೋಪಯ್ಯ,