ಮಡಿಕೇರಿ, ಜ.31 : ತುಳುಭಾಷೆ ಮತ್ತು ಸಮುದಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೆಟ್ಟ ರೀತಿಯಲ್ಲಿ ಪ್ರತಿಬಿಂಬಿಸಿ ಹೇಳಿಕೆಗಳನ್ನು ಹಾಕಿರುವ ಬೆಂಗಳೂರಿನ ಕರ್ನಾಟಕÀ ರಕ್ಷಣಾ ವೇದಿಕೆ ಕಾರ್ಯದರ್ಶಿ ಎಂದು ಹೇಳಿಕೊಂಡಿರುವ ಜಾನ್ ಧೋರಣೆಯನ್ನು ಖಂಡಿಸುವದಾಗಿ ತಿಳಿಸಿರುವ ತುಳುವೆರ ಜನಪದ ಕೂಟ, ಆತನನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ಭಾಷೆಯೂ ಒಂದಾಗಿದ್ದು, ಇದರ ಸಾಹಿತ್ಯ ಸಂಸ್ಕøತಿ ಪರಂಪರೆ ಅತ್ಯಂತ ವಿಶಾಲವಾದದ್ದು. ಈ ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಒಳಪಡಿಸುವ ಪ್ರಯತ್ನಗಳು ನಡೆಯುತ್ತಿದೆ. ಇಂತಹ ಭಾಷೆಯ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿರುವದು ತುಳು ಭಾಷಿಕ ಸಮುದಾಯಗಳಿಗೆ ನೋವನ್ನು ಉಂಟು ಮಾಡಿದೆ.
ರಾಜ್ಯಕ್ಕೆ ಒಳಿತನ್ನು ಉಂಟುಮಾಡುವ ಕೆಲಸವನ್ನಷ್ಟೆ ಕನ್ನಡ ಪರ ಸಂಘಟನೆಗಳು ಮಾಡಲಿ ಎಂದು ಮನವಿ ಮಾಡಿಕೊಂಡ ಅವರು ಇದೇ ರೀತಿ ತುಳು ಸಮುದಾಯದ ಆರಾಧ್ಯ ದೈವವಾದ ಸ್ವಾಮಿ ಕೊರಗಜ್ಜನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಘಟನೆ ನಡೆದಿದೆ. ಈ ರೀತಿ ಭಾಷೆ-ಭಾಷೆಗಳ ನಡುವೆ ಗೊಂದಲವನ್ನು ಸೃಷ್ಟಿಸಿ ಹಾದಿ ತಪ್ಪಿಸುವ ಕೆಲಸವನ್ನು ಯಾರೂ ಮಾಡಬಾರದು. ವಿವಿಧ ಕ್ಷೇತ್ರಗಳಲ್ಲಿ ತುಳುಭಾಷಿಕರ ಕೊಡುಗೆ ಅಪಾರವಾಗಿದ್ದು, ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಕಾರ್ಯವನ್ನು ಯಾರೇ ಮಾಡಿದರೂ ಶಿಕ್ಷೆಗೆ ಗುರಿ ಪಡಿಸಬೇಕೆಂದು ರವಿ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಉಪಾಧ್ಯಕ್ಷ ಬಿ.ಡಿ.ನಾರಾಯಣ್ ರೈ, ಜಿಲ್ಲಾ ಸಲಹೆಗಾರ ಎಂ.ಡಿ. ನಾಣಯ್ಯ, ಮಡಿಕೇರಿ ತಾಲೂಕು ಅಧ್ಯಕ್ಷ ಪ್ರಭು ರೈ, ಮಡಿಕೆÉೀರಿ ತಾಲೂಕು ನಿರ್ದೇಶಕÀ ಬಿ.ಎಸ್.ಆನಂದ್ ಹಾಗೂ ಮಡಿಕೇರಿ ನಗರಾಧ್ಯಕ್ಷೆ ವಿಜಯಲಕ್ಷ್ಮಿ ರವಿ ಶೆಟ್ಟಿ ಉಪಸ್ಥಿತರಿದ್ದರು.