ಸೋಮವಾರಪೇಟೆ, ಜ. 30: ಮಡಿಕೇರಿ ನೆಹರು ಯುವ ಕೇಂದ್ರ, ಜಿಲ್ಲಾ ಯುವ ಒಕ್ಕೂಟ, ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ, ಶುಂಠಿ ಮಂಗಳೂರು ಬಸವೇಶ್ವರ ಯುವಕ ಸಂಘದ ಆಶ್ರಯದಲ್ಲಿ ಯುವ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಗೌಡಳ್ಳಿ ಪ್ರೌಢಶಾಲಾ ಆವರಣದಲ್ಲಿ ಪ್ರಬಂಧಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆ ನಡೆಯಿತು.ಕಾರ್ಯಕ್ರಮದಲ್ಲಿ ಬಸವೇಶ್ವರ ಯುವಕ ಸಂಘದ ಎಂ.ಪಿ. ಲಿಂಗರಾಜು, ಕನ್ನಡ ಶಿಕ್ಷಕ ಮಹೇಶ್, ಕಲಾ ಶಿಕ್ಷಕ ಪೂವಯ್ಯ, ಗಣಿತ ಶಿಕ್ಷಕಿ ಕೆ.ಟಿ. ಚಂದ್ರಕಲಾ, ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ಎಂ.ಡಿ. ಹರೀಶ್, ಮುಖ್ಯ ಶಿಕ್ಷಕ ನಾಗೇಂದ್ರ ಇದ್ದರು. ಸ್ಪರ್ಧಾ ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಿದರು.