ಕುಶಾಲನಗರ, ಫೆ. 1: ಅವಿವಾಹಿತ ಯುವಕನೋರ್ವ ಕಲ್ಲು ಕೋರೆಯ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಗೊಂದಿಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗರಾಜು (28) ಆತ್ಮಹತ್ಯೆಗೆ ಶರಣಾದ ಯುವಕ. ಮದ್ಯವ್ಯಸನಿಯಾಗಿದ್ದ ಈತ ದಿನನಿತ್ಯ ಪೋಷಕರೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದ್ದು ಗುರುವಾರ ಕೋರೆಯ ನೀರಿನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.