ಕೂಡಿಗೆ, ಫೆ. 7: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ ಇದೀಗ ಹುಣಸೂರಿಗೆ ವರ್ಗಾವಣೆಗೊಂಡಿರುವ ಜೆ.ಇ. ಮಹೇಶ್ ಅವರಿಗೆ ಠಾಣೆಯ ವತಿಯಿಂದ ಬೀಳ್ಕೊಡಲಾಯಿತು. ಮಹೇಶ್ ದಂಪತಿಗಳಿಗೆ ಸನ್ಮಾನಿಸಲಾಯಿತು. ಈ ಸಂದರ್ಭ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಹಾಯಕ ಠಾಣಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಇದೀಗ ಶನಿವಾರಸಂತೆ ಠಾಣೆಗೆ ವರ್ಗಾವಣೆಗೊಂಡ ಎಂ.ಪಿ. ಈರಪ್ಪ ಅವರನ್ನೂ ಬೀಳ್ಕೊಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಶಾಲನಗರ ಡಿವೈಎಸ್‍ಪಿ ಮುರುಳೀಧರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಶಾಲನಗರ ವೃತ್ತ ನಿರೀಕ್ಷಕ ಕ್ಯಾತೆಗೌಡ, ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಜಗದೀಶ್, ಸಂಚಾರಿ ಪೊಲೀಸ್ ಠಾಣಾಧಿಕಾರಿ ಅಪ್ಪಾಜಿ, ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿ ಮಹೇಶ್, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನವೀನ್ ಗೌಡ ಇದ್ದರು.