ಕುಶಾಲನಗರ, ಫೆ. 7: ಕುಶಾಲನಗರ ಕಾಂಗ್ರೆಸ್ ಘಟಕದ ವತಿಯಿಂದ ಮನೆ ಮನೆ ಪ್ರಚಾರ ಕಾರ್ಯಕ್ರಮ ನಡೆಯಿತು. ಪಕ್ಷದ ಪ್ರಮುಖರು ಪಟ್ಟಣದ ವ್ಯಾಪ್ತಿಯ ಮನೆಗಳಿಗೆ ತೆರಳಿ ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು.

ಈ ಸಂದರ್ಭ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲೋಕೇಶ್, ಕುಶಾಲನಗರ ಕಾಂಗ್ರೆಸ್ ಘಟಕ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕುಡಾ ಅಧ್ಯಕ್ಷರಾದ ಬಿ.ಜಿ. ಮಂಜುನಾಥ್, ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ಪ್ರಮೋದ್ ಮುತ್ತಪ್ಪ, ಶಿವಶಂಕರ್, ಪ್ರಮುಖರಾದ ವಿರುಪಾಕ್ಷಯ್ಯ ಮತ್ತಿತರರು ಇದ್ದರು.