ಶ್ರೀಮಂಗಲ, ಫೆ. 10: ಟಿ.ಶೆಟ್ಟಿಗೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ, ಮುಖ್ಯಮಂತ್ರಿಗಳ ಕೊಡಗು ವಿಶೇಷ ಪ್ಯಾಕೇಜ್‍ನಡಿಯಲ್ಲಿ ರೂ. 5 ಲಕ್ಷ ವೆಚ್ಚದಲ್ಲಿ ಡಾಂಬರೀಕರಣವಾಗಿರುವ ಹರಿಹರ ಕುಂದೂರು ರಸ್ತೆಯನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವು ಮಾದಪ್ಪ ಉದ್ಘಾಟನೆ ಮಾಡಿದರು. ಇದಲ್ಲದೆ ಹರಿಹರ ಗ್ರಾಮದ ತೀತಿರ-ನಾಗವಂಡ ಕುಟುಂಬ ರಸ್ತೆ ಅಭಿವೃದ್ಧಿಗೆ ರೂ. 5 ಲಕ್ಷ, ಬೆಟ್ಟಚಿಕ್ಕಿ ದೇವಸ್ಥಾನ ರಸ್ತೆಗೆ ರೂ. 5 ಲಕ್ಷ, ಪೆಮ್ಮಣಮಾಡ-ತೀತಿರ ಕುಟುಂಬಸ್ಥರ ರಸ್ತೆಗೆ ರೂ. 5 ಲಕ್ಷÀದ ಅನುದಾನದಲ್ಲಿ ನಡೆಯುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದÀರ್ಭ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿ.ಪಂ. ಸದಸ್ಯ ಬಾನಂಡ ಪೃಥ್ಯು, ತಾ.ಪಂ. ಸದಸ್ಯ ಪಲ್ವಿನ್ ಪೂಣಚ್ಚ, ಗ್ರಾ.ಪಂ. ಸದಸ್ಯ ಮುಕ್ಕಾಟಿರ ಸಂದೀಪ್, ಹರಿಹರ ಕಾಂಗ್ರೆಸ್ ಬೂತ್ ಅಧ್ಯಕ್ಷ ಪೆಮ್ಮಣಮಾಡ ಮನು ತಮ್ಮಯ್ಯ, ಕಾಳಿಮಾಡ ಪ್ರಶಾಂತ್, ಅಪ್ಪಂಚಂಗಡ ಮೋಟಯ್ಯ, ಚೊಟ್ಟೆಯಂಡಮಾಡ ದಿನೇಶ್, ತೀತಿರ ಪ್ರಭು, ಗ್ರಾ.ಪಂ. ಸದಸ್ಯ ಚೊಟ್ಟೆಯಂಡಮಾಡ ಉದಯ, ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ಮಾಣೀರ ಮಂಜು, ನಿವೃತ್ತ ಪ್ರಾಂಶು ಪಾಲ ಬಾಚೀರ ಕಾಶಿ, ನಾಗವಂಡ ಜಯ, ಕಳ್ಳೇಂಗಡ ಸಚಿನ್, ಹಾಗೂ ಕಾರ್ಯಕರ್ತರು ಹಾಜರಿದ್ದರು.