ಮಡಿಕೇರಿ, ಫೆ. 14: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ನಗರದ ಲೋಕಾಯುಕ್ತ ಅಧಿಕಾರಿಗಳು ತಾಲ್ಲೂಕುವಾರು ಭೇಟಿ ನೀಡಿ ದೂರು ಅರ್ಜಿ ವಿತರಿಸಲಿದ್ದು, ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಇಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವೀರಾಜಪೇಟೆಯ ತಾಲೂಕು ಕಚೇರಿ ಆವರಣದಲ್ಲಿ ಹಾಗೂ ತಾ. 16 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ತಾಲೂಕು ಕಚೇರಿ ಆವರಣದಲ್ಲಿ ಸ್ವೀಕರಿಸಲಿದ್ದಾರೆ ಎಂದು ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಭ ಹಾಗೂ ಇನ್ನೀತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರದಲ್ಲಿ ನೀಡಬಹುದಾಗಿದ್ದು, ಸಾರ್ವಜನಿಕರು ಕರ್ತವ್ಯ ಲೋಪವೆಸಗುವ ಸರ್ಕಾರಿ ಹಾಗೂ ಸಾರ್ವಜನಿಕರ ನೌಕರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಠಾಣೆ, ಗೌಳಿಬೀದಿ, ಅಥವಾ 08272-220797 ಸಂಪರ್ಕಿಸಬಹುದು.