ಕೂಡಿಗೆ, ಮಾ.1 : ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಳ್ಳಿ ಗ್ರಾಮ ನಿವಾಸಿಯಾದ ಭಾಗ್ಯಮ್ಮ ನಿಲಕಂಠ ಎಂಬವರ ಬಾಳೆ ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಹಾಕಿದ ಪರಿಣಾಮ ತೋಟದಲ್ಲಿ ಒಂದು ಎಕರೆ ಪ್ರದೇಶದಲ್ಲಿದ್ದ ಬಾಳೆ ಮತ್ತು ಅಡಿಕೆ ಗಿಡಗಳು ಬೆಂಕಿಗೆ ಆಹುತಿಯಾಗಿವೆ. ಅಂದಾಜು ಒಂದೂವರೆ ಲಕ್ಷಕ್ಕೂ ಅಧಿಕ ನಷ್ಟವಾಗಿದೆ.