ಮಡಿಕೇರಿ, ಮಾ. 1: ವಿಧಾನಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚಿಸಲು ತಾ. 8 ರಂದು ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ರಾಜಕೀಯ ಪಕ್ಷಗಳ ಜಿಲ್ಲಾಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮ ಪ್ರೆಸ್‍ಕ್ಲಬ್ ವತಿಯಿಂದ ಆಯೋಜಿಸಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮುಕ್ಕಾಟೀರ ಶಿವು ಮಾದಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾರ್ ವೀಕ್ಷಣೆ : ಕೊಡಗು ಪ್ರೆಸ್‍ಕ್ಲಬ್ ವತಿಯಿಂದ ಜಿಲ್ಲೆಯ ಪತ್ರಕರ್ತರಿಗೆ ತಾ.5 ರಂದು ನೆಲ್ಲಿಹುದಿಕೇರಿಯಲ್ಲಿ ಪಿ.ಸಿ. ಅಹಮ್ಮದ್ ಕುಟ್ಟಿ ಹಾಜಿ ಅವರ ತೋಟದ ಮ್ಯೂಸಿಯಂನಲ್ಲಿರುವ ಹಳೆಯ ವಿಂಟೇಜ್ ಕಾರ್‍ಗಳು, ಬೈಕ್‍ಗಳು, ಎತ್ತಿನಗಾಡಿಗಳ ವೀಕ್ಷಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಆರ್ಥಿಕ ನೆರವು: ಅಪಘಾತದಲ್ಲಿ ಕೈ ಮುರಿತಕ್ಕೆ ಒಳಗಾಗಿ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಲಬ್ ಸದಸ್ಯರಾಗಿರುವ ಪತ್ರಕರ್ತ ಪಿ.ಎ. ಚಂದ್ರ ಅವರ ಚಿಕಿತ್ಸೆಗೆ ಕ್ಲಬ್ ವತಿಯಿಂದ ರೂ. 10 ಸಾವಿರ ಆರ್ಥಿಕ ನೆರವು ನೀಡಲು ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಭೆಯಲ್ಲಿ ನೂತನ ಪ್ರಧಾನ ಕಾರ್ಯದರ್ಶಿ ಆರ್. ಸುಬ್ರಮಣಿ, ಖಜಾಂಚಿ ರೆಜಿತ್‍ಕುಮಾರ್ ಗುಹ್ಯ, ಉಪಾಧ್ಯಕ್ಷ ಬಿ.ಎಸ್. ಲೋಕೇಶ್‍ಸಾಗರ್, ವಿಘ್ನೇಶ್ ಎಂ. ಭೂತನಕಾಡು, ಸಂಘಟನಾ ಕಾರ್ಯದರ್ಶಿ ಎಂ.ಎ. ಅಜೀಜ್, ಜಂಟಿ ಕಾರ್ಯದರ್ಶಿ ನಾಗರಾಜ ಶೆಟ್ಟಿ, ನಿರ್ದೇಶಕರಾದ ಕೆ.ಬಿ. ಮಂಜುನಾಥ್, ಎಸ್.ಎಂ. ಮುಬಾರಕ್ ಇದ್ದರು.