ಮಡಿಕೇರಿ, ಮಾ.1 : ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಕಿವಿ ತುಂಬಿಸುವ ಸರ್ಕಾರವಾಗಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರ ಹೊಟ್ಟೆ ತುಂಬಿಸುವ ಸರ್ಕಾರವಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ವೆಂಕಪ್ಪ ಗೌಡ ವಿಶ್ಲೇಷಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಬಡವರ ಹೊಟ್ಟೆ ಹಸಿವನ್ನು ನೀಗಿಸುತ್ತಿದ್ದು, ಅಭಿವೃದ್ಧಿ ಕಾರ್ಯಗಳ ಮೂಲಕವೇ ಜನರಿಗೆ ಹತ್ತಿರವಾಗಿದೆ ಎಂದರು. ಪ್ರಧಾನಮಂತ್ರಿಗಳು ತಮ್ಮ ಬಜೆಟ್ನಲ್ಲಿ ಕೃಷಿಕರ ಆದಾಯ ದುಪ್ಪಟ್ಟಾಗಲಿದೆ ಎಂದು ಹೇಳಿದ್ದಾರೆ. ಆದರೆ, ಇಂದು ಕಾಳುಮೆಣಸು, ರಬ್ಬರ್, ಅಡಿಕೆ, ಕಾಫಿ ಸೇರಿದಂತೆ ಇನ್ನಿತರ ಬೆಳೆಗಳ ಬೆಲೆ ಸಂಪೂರ್ಣವಾಗಿ ಕುಸಿದಿದ್ದು, ಆದಾಯ ದುಪ್ಪಟ್ಟಾಗುವ ಬದಲು ಅರ್ಧಕ್ಕೆ ಬಂದು ನಿಂತಿದೆಯೆಂದು ಟೀಕಿಸಿದರು.
ಕರ್ನಾಟಕ ಗೂಂಡಾ ರಾಜ್ಯವಾಗಿದೆಯೆಂದು ಶಾಸಕ ಅಪ್ಪಚ್ಚು ರಂಜನ್ ಮಾಡಿರುವ ಆರೋಪವನ್ನು ಖಂಡಿಸಿದ ವೆಂಕಪ್ಪ ಗೌಡ, ಕಾರ್ತಿಕ್ ರಾಜ್, ವಿನಾಯಕ ಬಾಳಿಗÀ, ಡಿವೈಎಸ್ಪಿ ಕಲ್ಲಪ್ಪ, ಬಂಟ್ವಾಳದ ಹರೀಶ್ ಪೂಜಾರಿ, ಪ್ರವೀಣ್ ಪೂಜಾರಿ, ವಿಜಯಪುರದ ದಾನಮ್ಮ, ದೀಪಕ್, ಧನ್ಯಶ್ರೀ, ಸುಳ್ಯದ ಅಕ್ಷತಾ ಇವರುಗಳ ಸಾವಿನ ಪ್ರಕರಣದಲ್ಲಿ ಬಿಜೆಪಿ ಹಾಗೂ ಹಿಂದೂ ಪರ ಸಂಘÀಟನೆಗಳ ಕಾರ್ಯಕರ್ತರು ಭಾಗಿಗಳೆಂದು ಆರೋಪಿಸಿದರು. ಸರಕಾರದ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿರುವ ಶಾಸಕ ಅಪ್ಪಚ್ಚು ರಂಜನ್ ಅವರು, ಈ ಹತ್ಯಾ ಪ್ರಕರಣಗಳಿಗೆ ಕಾರಣ ಯಾರು ಎನ್ನುವದನ್ನು ಮೊದಲು ತಿಳಿದುಕೊಳ್ಳಲಿ ಎಂದರು. ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದೇ ಇದ್ದು, ಅಭ್ಯರ್ಥಿಗಳು ಯಾರೇ ಆದರು ಗೆಲ್ಲಿಸುವ ಉತ್ಸಾಹ ಕಾರ್ಯಕರ್ತ ರಲ್ಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಎ.ಯಾಕೂಬ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ, ಜಿಪಂ ಸದಸ್ಯೆ ಕುಮುದಾ ಧರ್ಮಪ್ಪ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರ ಮೈನ ಉಪಸ್ಥಿತರಿದ್ದರು.